Thursday, January 31, 2008

Vachana- ವಚನಗಳು


ದೇವರ ದಾಸಿಮಯ್ಯನವರು ರಚಿಸಿದ ವಚನಗಳು:

ಅಚ್ಚ ಶಿವಭಕ್ತಂಗೆ ಹೊತ್ತಾರೆ ಅಮವಾಸೆ
ಮಟಮಧ್ಯಾಹ್ನ ಸಂಕ್ರಾಂತಿ;
ಮತ್ತೆ ಅಸ್ತಮಾನ ಪೌರ್ಣಮಿ ಹುಣ್ಣಿಮೆ;
ಭಕ್ತನ ಮನೆಯ ಅಂಗಳವೆ ವಾರಣಾಸಿ ಕಾಣಾ!
ರಾಮನಾಥ ||

Wednesday, June 20, 2007

ವಚನಗಳು - Devara Dasimayya's Vachanas

ದೇವಾಂಗ ಜನಾಂಗದಲ್ಲಿ ಮೊಟ್ಟ ಮೊದಲು ಪ್ರಸಿದ್ಧರಾದವರು ದೇವರ ದಾಸಿಮಯ್ಯ.
ಸೀರೆ ನೇಯುವ ಕೆಲಸದಿಂದ ಜೀವನ ಸಾಗಿಸುತ್ತಿದ್ದ ಇವರು "ರಾಮನಾಥ "ಎನ್ನುವ ನಾಮಂಕಿತವನ್ನು ಕೊಟ್ಟು ಅನೇಕ ವಚನಗಳನ್ನು ರಚಿಸಿದ್ದಾರೆ.
ತುಂಬಾ ಉಪಯುಕ್ತ ಮತ್ತು ತಮ್ಮ ದಿನನಿತ್ಯದ ಜೀವನಕ್ಕೆ ಸಂಭಂದಿಸಿದ ವಿಷಯಗಳ ಬಗ್ಗೆಯೆ ರಚಿಸಿದ ದೇವರ ದಾಸಿಮಯ್ಯ ಅವರ ವಚನಗಳು ತುಂಬಾ ಸರಳವಾಗಿ ಮನೆಸೂರೆಗೊಳ್ಳುತ್ತವೆ.



ದೇವರ ದಾಸಿಮಯ್ಯನವರು ರಚಿಸಿದ ವಚನಗಳು:

ಶಿವಭಕ್ತರು ತಮ್ಮ ನಿಜ ಕೈಲಾಸಕ್ಕೆ ಹೋದರೆ
ಅವರರಸಿಯ ಪಾರ್ವತಿಯ ಸರಿ ಎಂದು ಕಾಣಬೇಕು
ಅಲ್ಲಿ ಅನುಸರಣೆಯ ಕೊಟ್ಟು ಬೆರೆಸಿ ಮಾತಾಡುವ ನರಕಿಗಳನೇನೆಂಬೆ
ರಾಮನಾಥ?
Related Posts Plugin for WordPress, Blogger...

Devara Dasimayya Blog Popular Posts

My Blog List

Facebook Followers